10 ಜುಲೈ 2009

ಮಾತು...ಮುಗಿದ ಮೇಲೆ...


ಮಾತೆಲ್ಲಾ ಮುಗಿದ ಮೇಲೆ.. ಮನದೊಳಗೆ ಮೌನದ ಕೋಣೆ....

ಹೋದಲ್ಲೆಲ್ಲಾ ಮಾತು-ಕತೆ.. ಅದರಲ್ಲಿ ಹುರುಳೆಷ್ಟು..? ಪುಕ್ಕಟೆ ಎಷ್ಟು...? ಬಡಾಯಿ ಎಷ್ಟು...? ಮಾತಿಗಾಗಿ ಮಾತೆಷ್ಟು...? ಅಂತ ಒಂದು ಕ್ಷಣ ಯೋಚಿಸಿದರೆ, ಹುರುಳು ಎಷ್ಟು ಸಿಕ್ಕಾವು ಹೇಳಿ...? ಸುಮ್ಮನೆ ದಿನವಿಡೀ .. ಮಾತು.. ಮಾತು ... ಮಾತು... ಹಾಗೆ ಮಾತನಾಡುವಾಗ ನಾವು ಕೆಲವೊಮ್ಮೆ ನೇರವಾಗಿ[ ಕಣ್ಣಿಗೆ ಕೈ ಹಾಕಿದ ಹಾಗೆ] ಹೇಳಿ ಬಿಡುತ್ತೇವೆ... ಎದುರಿನಾತನಿಗೆ ಏನಾಗುತ್ತದೆ... ಅದರ ಪರಿಣಾಮ ಏನು ಎನ್ನವುದರ ಬಗ್ಗೆ ಆ ಕ್ಷಣ ಯೋಚಿಸುವುದಿಲ್ಲ ಮಾತು ಮಾತಾಗಿ ಹೋಗುತ್ತದೆ.. ಪರಿಣಾಮ ನಂತರ.... ಆದರೆ ಅದು ತಪ್ಪಾಗಿದ್ದರೂ ಮತ್ತೆ ಉಳಿಯುವುದು ಸಮರ್ಥನೆಯೊಂದೇ ದಾರಿ.. ಹೀಗಾಗಿ ಅದೆಷ್ಟೂ ಸಂಬಂಧಗಳೂ ಕಡಿದುಹೋಗಿವೆ.

ಇದ್ಯಾಕೆ ನೆನಪಾಯಿತೀಗ.. ??

ಮೊನ್ನೆ ನಾವು ಸುದ್ದಿಯೊಂದನ್ನು ಮಾಡುವುದಕ್ಕಾಗಿ 3 ಜನ ಮಿತ್ರರು ಒಂದು ಪ್ರತಿಷ್ಠಿತ ಶಾಲೆಗೆ ಹೋಗಿದ್ದೆವು. ಅಲ್ಲಿನ ಪ್ರಮುಖ ಅಧ್ಯಾಪಕರೊಬ್ಬರು 2 ವಾರದಿಂದ ದೂರವಾಣಿ ಮೂಲಕ ಹೇಳುತ್ತಲೇ ಇದ್ದರು. ಹಾಗಾಗಿ ಬಿಡುವು ಮಾಡಿ ಅಲ್ಲಿಗೆ ತೆರಳಿದ್ದಾಯಿತು. ಮೊದಲು ಹೋದವರೇ ಪ್ರಾಂಶುಪಾಲರ ಕೊಠಡಿಗೆ ಹೋಗಿ ಮಾತನಾಡಲು ಆರಂಭಿಸಿದೆವು. ಅಲ್ಲಿನ ವಿಚಾರ “ಲೋಕ”ದ ವಿಚಾರವೂ ಮಾತಿನ ನಡುವೆ ಬಂತು. ಆಗ ಅಲ್ಲಿಗೆ ನಮಗೆ ದೂರವಾಣಿ ಮೂಲಕ ಸುದ್ದಿ ಹೇಳಿದ ಅಧ್ಯಾಪಕರೂ ಬಂದರು. ನಮ್ಮ ಪರಿಚಯವನ್ನೂ ನಾವು ಹೇಳಿದೆವು. ಅವರು ಮತ್ತೆ ನನ್ನಲ್ಲಿ ಕೇಳಿದರು.... ನಿಮ್ಗೆ ಈ ವಿಷ್ಯ ಹೇಗೆ ಗೊತ್ತಯ್ತಾ ಅಂತ.. ನಾನಂದೆ ನೀವೇ 2 ವಾರದಿಂದ ಫೋನು ಮಾಡ್ತಿದ್ದೀರಲ್ಲಾ ಅಂತ.. ಆಗ ಅವರಂದ್ರು .. ನಿಮ್ಗೆ ಫೋನು ಮಾಡಿಲ್ಲ .. ನಾನು ಇವರಿಗೆ [ ನನ್ನೊಂದಿಗೆ ಬಂದ ನನ್ನ ಮಿತ್ರ] ಮಾತ್ರಾ ಫೋನು ಮಾಡಿದ್ದು ಎಂದು ಹೇಳಿದ್ರು. ಆಗ ನಂಗಂತೂ ಒಮ್ಮೆ ಶಾಕ.. ಮೌನ... ಮತ್ತೆ ಸಡನ್ ಆಗಿ ಕೇಳಿದೆ.. “ ಹಾಗಿದ್ರೆ ನಾನು ಬಂದಿದ್ದು ತಪ್ಪಾಯ್ತು ಅಂತೀರಾ” ಅಂತ ಹೇಳಿ ಬಿಟ್ಟೆ.. ಮತ್ತೆ ಒಮ್ಮೆ ಮೌನ.. ಕೂಡಲೇ ಪ್ರಾಂಶುಪಾಲರು ಹೇಳಿದ್ರು ಅಲ್ಲ ನಿಮ್ಗೆ ಹೇಗೆ ಗೊತ್ತಾಯ್ತು ಅಂತ ಕ್ಯೂರಿಯಾಸಿಟಿ ಅಂತ..... ಸರಿ ಸಂತ ನಾವು ಸುದ್ದಿಯತ್ತ ಹೋದೆವು.. ಆ ವಿಷಯ ಅಲ್ಲಿಗೇ ಬಿಟ್ಟು.. ಆದ್ರೆ ಮತ್ತೆ ಆ ಅಧ್ಯಾಪರು ಹೇಳಿದ್ರು .. ಅಲ್ಲ ನಿಮ್ಗೆ ಆಗ ನಾನು ಹಾಗೆ ಹೇಳಿದ್ದು ಬೇಸರ ಆಯ್ತಾ ಅಂತ ಕೇಳಿದ್ರು.. ಇಲ್ಲ ಇಲ್ಲ ಅಂತ ನಾನು ಆಗಲೇ ಆ ವಿಷಯ ಬಿಟ್ಟಾಯ್ತು ಅಂತ ಹೇಳಿದೆ.......

ಇದೊಂದು ಚಿಕ್ಕ ಘಟನೆ...

ಆದ್ರೆ ನಂಗೆ ಮತ್ತೆ .. ಮತ್ತೆ ಆ ವಿಷಯ ದಿನವಿಡೀ ಕಾಡುತ್ತಲೇ ಇತ್ತ... ನಾನು ಹಾಗೆ ಅಲ್ಲಿ ಹೇಳಿದ್ದು ಸರಿಯಾ .. ತಪ್ಪಾ... ನನ್ನನ್ನು ನಾನು ಸಮರ್ಥಿಸಿಕೊಳ್ಳುವುದು ಇದ್ದದ್ದೇ ... ಹಾಗಾಗಿ ಆ ಬಗ್ಗೆ 3 ನೇ ವ್ಯಕ್ತಿಯಾಗಿ ಚರ್ಚಿಸಿದೆ.. ಮಿತ್ರರೊಂದಿಗೆ ಆ ಬಗ್ಗೆ ಮಾತಾಡಿದೆ... 2 ರೀತಿಯ ಅಭಿಪ್ರಾಯ ಬಂತು.... ಆದರೂ ನನಗೆ ಸಮಾಧಾನ ತಾರದ ವಿಷಯ ಅದಾಯಿತು.

ಆ ಬಳಿಕ ಆದರೆ ನಂಗನಿಸಿತು .. ನನ್ನೊಳಗೆ ಅದೆಲ್ಲೋ ಅಹಂ ಆಗ ಕುಳಿತಿತ್ತಾ..?? ನಿಜಕ್ಕೂ ಅಧ್ಯಾಪಕ ಹೇಳಿದ ರೀತಿ ಯಾವುದು ಎಂಬುದರ ಬಗ್ಗೆ ನಾನು ಯಾಚಿಸದೆ ಆ ಕ್ಷಣದ ನನ್ನ ಪ್ರತಿಕ್ರಿಯಿಂದ ಅವರಿಗೂ ನೋವಾಗಿದೆ. ಅಂತ ನನಗೆ ಅನಿಸಿತು.. ನನಗೂ ಅವರ ಮಾತು ಆ ಕ್ಷಣಕ್ಕ ನೋವು ತಂದದ್ದೂ ಅಷ್ಟೇ ಸತ್ಯ. ಯಾಕೆಂದರೆ ನಾನು ಕೆಲಸ ಮಾಡುವ ಸಂಸ್ಥೆ ನನಗೆ ದೊಡ್ಡದೇ.... ಹಾಗಾಗಿ ಮತ್ತೊಮ್ಮೆ ನನ್ನೊಳಗೆ ನಾನು ಸಮರ್ಥಿಸಿಕೊಂಡೆ...

ಆದರೆ ಅನೇಕ ಸಲ ನನಗೆ ಅನಿಸಿದ್ದಿದೆ.. ಅದೆಲ್ಲೋ ಅಹಂ ಎನ್ನುವುದು ನನ್ನೊಳಗೆ ಸೇರಿಕೊಂಡಿದೆಯಾ..? ಹಾಗಾಗಿ ನನ್ನೊಳಗಿನಿಂದ ಕೆಲ ಮಾತುಗಳು ಹಾಗೆ ಹೇಳಿಸಿದೆಯಾ..? ಇಲ್ಲ ಹಾಗಾಗದಂತೆ ಎಚ್ಚರಿಕೆ ವಹಿಸಬೇಕು...

ಏಕೆಂದರೆ ಮಾತು ಅನ್ನುವುದು ಆಡಿದರೆ ಮುಗಿಯಿತು... ಅದು ದಾಖಲಾಗಿ ಬಿಡುತ್ತದೆ... ಮತ್ತೆ ಹಿಂದೆ ಸರಿಯಬಾರದು.... ಸರಿಯಲೂ ಆಗದು... ಅದು ನೇರವಾಗಿ ಇರಬೇಕು... ಮಾತಿಗೆ ಇಷ್ಟವಿಲ್ಲದಿದ್ದೆ ಮೌನವೇ ಉತ್ತರವಾಗಬೇಕು... ಹಾಗಾಗಿಯೇ ಅಂದು ನಾನು ಮೌನಿಯಾದ್ದು....

ಹಾಗಾಗಿ... ಮಾತು ಮುತ್ತು .. ಮೌನ ಬಂಗಾರ....!!!

1 ಕಾಮೆಂಟ್‌:

ಹರೀಶ ಮಾಂಬಾಡಿ ಹೇಳಿದರು...

ನಾನೂ ಒಮ್ಮೊಮ್ಮೆ ಬಿರುಮಾತಾಡಿ ಮತ್ತೆ ಗಂಟೆಗಟ್ಟಲೆ ತಲೆಕೆಡಿಸಿಕೊಳ್ಳುವುದು ಉಂಟು. ಆದರೆ ಅದೆಲ್ಲಾ ನೆನಪಿಸ್ಕೊಳ್ಳದೆ ಕಸದ ತೊಟ್ಟಿಗೆ ಕಸದ ರಾಶಿ ಹಾಕುವ ಹಾಕ್ಗೆ ಮನಸ್ಸಿನಿಂದ ಎಸೆದುಬಿಡಬೇಕು.