01 ಅಕ್ಟೋಬರ್ 2011

ಆತ ಹೇಳಿದ ಕತೆ. .

ನನ್ನ ಸ್ನೇಹಿತನೊಬ್ಬ ಒಂದು ಕತೆ ಬಿಡಿಸಿಟ್ಟ. ಅದು ನಮ್ಮ ಊರ ಭಾಷೆಯಲ್ಲಿ ಹೇಳುವುದಾದರೆ ಮಾತನಾಡಲೇಬಾರದು.ಮಾತನಾಡಿದರೆ ಆತ ಕೆಟ್ಟವನು. ಆದರೆ ಇಂದು ಅಂತಹ ಪರಿಸ್ಥಿತಿ ಇಲ್ಲ ಅಂತ ನಾನು ಅಂದುಕೊಂಡಿದ್ದೇನೆ.

ಆತ ಹೇಳಿದ ಸಂಗತಿ , ಅವರಿಗೆ ಮದುವೆಯಾಗಿ 15 ವರ್ಷಗಳಾಗಿವೆ. ಆದರೆ ಇನ್ನೂ ಮಕ್ಕಳಾಗಿಲ್ಲ. ಅದಕ್ಕಾಗಿ ದೇವರು , ಮಂತ್ರ , ಪೂಜೆ , ಹರಕೆ ಹೀಗೆ ಎಲ್ಲವೂ ಆಗಿತ್ತು. ಆದರೆ ಮತ್ತೂ ಮಕ್ಕಳಾಗಿಲ್ಲ. ಕಾರಣ ಏನು ಎಂದು ವೈಜ್ಞಾನಿಕವಾಗಿ ಕಂಡುಹುಡುಕುವ ಕೆಲಸವನ್ನೂ ಮಾಡಿಲ್ಲ. ಇತ್ತೀಚೆಗೆ ಅವರು ದೇವಸ್ಥಾನವೊಂದರಲ್ಲಿ ಪೂಜೆ ಮಾಡಿಸಲು ಬಂದಿದ್ದರಂತೆ. ಅಲ್ಲಿ ಅಂತಹ ಜನರನ್ನೇ ಮೋಸ ಮಾಡುವ ಗುಂಪೊಂದು ಇತ್ತು. ಆಸೆ ಹುಟ್ಟಿತು ಮತ್ತೂ ಒಂದಿಪ್ಪತ್ತು ಸಾವಿರ ಖರ್ಚು ಮಾಡಿದರು. ಆದರೂ ಪ್ರಯೋಜನವಿಲ್ಲ. ಕೊನೆಗೆ ಯಾರೋ ಹೇಳಿದಂತೆ ಸರಿಯಾದ ವೈದ್ಯರಲ್ಲಿ ಗುಪ್ತವಾಗಿ ಮಾತನಾಡಿ , ಆಪ್ತ ಸಮಾಲೋಚನೆ ಮಾಡಿ ಎಂದು ಸಲಹೆ ನೀಡದರಂತೆ. ಅಂತೂ ಹೆಂಡತಿಯ ಒತ್ತಾಯಕ್ಕೆ ಆಪ್ತ ಸಮಾಲೋಚನೆಗೆ ಹೋದರಂತೆ. ಆಗ ತಿಳಿಯಿತು ಅವನಿಗೇ ಚಿಕ್ಕದೊಂದು ಸಮಸ್ಯೆ.ಅದಕ್ಕಾಗಿ ಇಷ್ಟು ವರ್ಷ ಕಾಯಲೇ ಬೇಡವಿತ್ತು. ಚಿಕ್ಕದೊಂದು ಸರ್ಜರಿ ಮಾಡಿಸಿದರೆ ಮುಗೀತು ಎಂದರಂತೆ ವೈದ್ಯರು. ಒಂದು ವಾರದ ನಂತರ ಅದೂ ಆಯಿತು. ಆ ಬಳಿಕ ಅವಳು ಮಗುವನ್ನೂ ಪಡೆದಳು. ಇದು ಅವರೊಬ್ಬರ ಕತೆ ಅಲ್ಲ. ಅದೆಷ್ಟೋ ಜನರ ಕತೆ.

ಆದರೆ ಇಲ್ಲಿ ವಿಷಯ ಏನು ಗೊತ್ತಾ ? ಆಪ್ತ ಸಮಾಲೋಚಕರದ್ದೇ. ಅವನು ಅಂತಾನೆ ಈ ಸಮಾಲೋಚಕರು ಯಾರು ಎಲ್ಲಿರುತ್ತಾರೆ ಅಂತಾನೆ ಹಲವರಿಗೆ ಗೊತ್ತೇ ಇರುವುದಿಲ್ಲ. ಅವರಲ್ಲಿ ಕೆಲವರು ಸಮಾಲೋಚನೆಗಾಗಿ ಶುಲ್ಕವನ್ನೂ ವಿಧಿಸುತ್ತಾರೆ. ಅದೂ ಪರವಾಗಿಲ್ಲ. ಆತ ಹೇಳಿದ ಈಗ ಅದಕ್ಕಾಗಿಯೇ ಕೆಲವು ಬ್ಲಾಗ್‌ಗಳು ಶುರುವಾಗಿದೆ.ಅವೂ ಕೂಡಾ ಪ್ರಯೋಜನವಾದೀತು ಅಂತಾನೆ ಆತ.ಅದರ ಲಿಂಕ್ ಇಲ್ಲಿದೆ (http://www.dehaveene.blogspot.com/) ಬೇಕಾದವರು ನೋಡಬಹುದು. ಅದರ ಜೊತೆಗೆ ಆತ ಹೇಳಿದ ಈ ಸಮಾಲೋಚಕರಲ್ಲಿ ಕೆಲವರು ಗಂಟೆಗೆ 1 ಸಾವಿರ ರೂಪಯಿ ಶುಲ್ಕ ವಿಧಿಸುತ್ತಾರೆ ಅಂತೆ. .!.

ಇದು ಅಸಹ್ಯ ಅಂತ ಭಾವಿಸಬಾರದು. ಏಕೆಂದರೆ ಬದುಕು ಪೂರ್ತಿಯಾಗಬೇಕಾದರೆ ಅದೂ ಬೇಕು. ಅದೇ ಬದುಕು ಆಗಬಾರದು ಅಷ್ಟೆ. ಅದಿಲ್ಲದೇ ಇದ್ದಿದ್ದರೆ ಜಗತ್ತು ಯಾವಾಗಲೋ ಮುಗಿದುಹೋಗುತ್ತಿತ್ತು ಅಲ್ಲವೇ. ಅನಾದಿ ಕಾಲದ ದೇವಸ್ಥಾನದ ಕೆತ್ತನೆಗಳಲ್ಲೂ ಅದ್ಭುತವಾಗಿ ಹೇಳಲಾಗುತ್ತಿತ್ತು.


ಕಾಮೆಂಟ್‌ಗಳಿಲ್ಲ: