28 ಆಗಸ್ಟ್ 2015

ಸ್ವಲ್ಪ ನೆಮ್ಮದಿಯಾಗಿರೋಣ. . . ಅದಕ್ಕಾಗಿ ಪ್ರಯತ್ನಿಸೋಣ. .


                                            (Photo from net)
ಆ ವಿಡಿಯೋ ದೇಶದಲ್ಲೆಲ್ಲಾ ಹರಿದಾಡಿತು. .  ನೋಡಿದ ಜನ ಹೀಗೂ ಆಗುತ್ತಲ್ಲಾ ಅಂದರು. .  ಅದೇ ಘಟನೆಗಾಗಿ ಭಾರೀ ಚರ್ಚೆಯಾಯಿತು,. . ಆದರೆ ಯಾರೊಬ್ಬರೂ ಅದಕ್ಕೆ ಪರಿಹಾರ ಏನು ಎಂಬ ಬಗ್ಗೆ ಹೇಳಿಲ್ಲ, ಸಮಸ್ಯೆಯ ಮೂಲದ ಬಗ್ಗೆ ಮಾತಾಡಿಲ್ಲ. . ಈಗ ಬೇಕಿರುವುದು  ರೋಗಕ್ಕೆ ಮದ್ದೇ ಹೊರತು  ಬ್ಯಾಂಡೇಜ್ ಅಲ್ಲ, ರೋಗದ ಬಗ್ಗೆಯೇ ವೈಭವ ಅಲ್ಲ. .
ನಾನು ಯೋಚಿಸಿದ್ದು ಮಂಗಳೂರಿನ ಅತ್ತಾವರದ ಬಳಿ ನಡೆದ ಹಲ್ಲೆ ಪ್ರಕರಣ. ಒಂದಷ್ಟು ಹುಡುಗರು ಸೇರಿ ಇನ್ನೊಬ್ಬ ಹುಡುಗನಿಗೆ ಹೊಡೆಯುತ್ತಿದ್ದರು, ಮತ್ತೊಬ್ಬ ಹುಡುಗ ಅದನ್ನೆಲ್ಲಾ ವಿಡಿಯೋ, ಫೋಟೊ ತೆಗೆದ ವಾಟ್ಸ್‍ಪ್‍ನಲ್ಲಿ  ಶೇರ್ ಮಾಡಿದ. ಅಷ್ಟೇ ಸಾಕಾಯಿತು.. ಇಂದು ಇಡೀ ಚೆರ್ಚ ಶುರುವಾಗಿದೆ. ಈ ವಿಡಿಯೋ ದಾಖಲಾಗದೆ ಮತ್ತೆಷ್ಟೋ ಘಟನೆಗಳು ನಮ್ಮಲ್ಲಿ  ನಡೆಯುತ್ತದೆ, ಚರ್ಚೆಯಾಗೋಲ್ಲ, ದೇಶದವರೆಗೆ ಹೋಗೋಲ್ಲ. ಇದು  ವಿಡಿಯೋ ಸಹಿತ ಸಾಕ್ಷಿ ಸಿಕ್ಕಿದೆ ಎಂಬ ಕಾರಣಕ್ಕೆ ದೊಡ್ಡ ಸುದ್ದಿಯಾಯಿತು. ಸುದ್ದಿಯಾಗಿದೆ . . . ಸುದ್ದಿಯಾಗಬೇಕು, ಹಲ್ಲೆ ಮಾಡುವ ಹಕ್ಕು ಯಾರಿಯೂ ಇಲ್ಲ, ಅದಕ್ಕೇ ಕಾನೂನು ಇದೆ, ಅನುಷ್ಟಾನ ಮಾಡಲು ಪೊಲೀಸರು ಇದ್ದಾರೆ. ಆದರೆ. .  . . .?
ಈ ಎಲ್ಲಾ ಪ್ರಕರಣ ಏಕೆ ನಡೆಯುತ್ತದೆ ಎಂದು  ಸುಮ್ಮನೆ ಯೋಚಿಸಿದಾಗ, ಕಾನೂನು ಇದೆ ನಿಜ ಇದೆ , ಅದು ಪಾಲನೆಯಾಗುತ್ತಿಲ್ಲ , ಹೀಗಾಗಿಯೇ ಆಕ್ರೋಶ ಹೆಚ್ಚಾಗಿ ಇಂತಹ ಪ್ರಕರಣಗಳೂ ಹೆಚ್ಚಾಗುತ್ತಿದೆ. ಸಿಕ್ಕಿದವನು ಯಾರೇ ಇರಲಿ, ಪೆಟ್ಟು ತಿನ್ನಲು ಸಿದ್ದವಾಗಿರಬೇಕು. ಈ ಪ್ರಕರಣದಲ್ಲಿ  ಮೇಲ್ನೋಟಕ್ಕೆ ಯುವತಿಯೊಬ್ಬಳು ಅನ್ಯಧರ್ಮದ ಯುವಕನೊಬ್ಬನೊಂದಿಗೆ ಮಾತನಾಡುತ್ತಿದ್ದಳು, ಅವನದೇ ಕಾರಿನಲ್ಲಿ  ಹೋಗುತ್ತಿದ್ದಳು ಎಂಬ ಕಾರಣಕ್ಕೆ ಹಲ್ಲೆ ನಡೆದಿದೆ ಎಂದು  ಈಗ ನಾವು ಮಾತನಾಡುತ್ತೇವೆ. ಇದು  ಸಾಂಕೇತಿಕವಾಗಿರಬಹುದು , ಹುಡುಗನೊಬ್ಬ ಹುಡುಗಿಯೊಂದಿಗೆ ಮಾತನಾಡುವುದು ತಪ್ಪಲ್ಲ  ನಿಜ, ಇಬ್ಬರೂ ಒಪ್ಪಿ ಮಾತನಾಡುವ, ಸುತ್ತಾಡುವ ಅಥವಾ ಇನ್ಯಾವುದೇ ಸಂಗತಿಗಳಿಗೆ ಯಾರೂ ತಲೆಕೆಡಿಸಿಕೊಳ್ಳಬೇಕಾಗಿಲ್ಲ.  ಆದರೆ ಆ ನಂತರ ಮುಂದೆ ಆಗುವ ಅನಾಹುತಗಳ ಬಗ್ಗೆ ನಮ್ಮಲ್ಲಿ ಎಷ್ಟು ಪ್ರಕರಣಗಳಲ್ಲಿ ಕ್ರಮವಾಗಿದೆ ?. ಕಾನೂನು ಕ್ರಮ ಎಲ್ಲಾಗಿದೆ ?. ಎಲ್ಲೋ ಒಂದೆರಡು  ಪ್ರಕರಣದಲ್ಲಿ ಕಾನೂನು ಪ್ರಕಾರ ಶಿಕ್ಷೆ ಆಗಿರಬಹುದು , ಆದರೆ ಬಹುತೇಕ ಪ್ರಕರಣಗಳಲ್ಲಿ  ಶಿಕ್ಷೆಯಾಗಿಲ್ಲ, ದೊಡ್ಡಮಟ್ಟದಲ್ಲಿ  ಸುದ್ದ್ದಿಯಾದ ಪ್ರಕರಣಗಳಲ್ಲಿ  ಮಾತ್ರವೇ ಶಿಕ್ಷೆಯಾಗಿದೆ.
ನಮ್ಮೂರಲ್ಲೇ ನೋಡುವುದಾದರೆ ತೀರಾ ಹಳೆಯದು ಎಂದರೆ ಪುತ್ತೂರಿನ ಸೌಮ್ಯ ಭಟ್ ಕೊಲೆ ಪ್ರಕರಣದಲ್ಲಿ  ಗಮನಿಸಿ  ಆರೋಪಿಗೆ ಶಿಕ್ಷೆಯಾಗಿದೆಯೇ ,ಆ ಆರೋಪಿ ಈಗಲೂ ನಾಪತ್ತೆ. .?, ಇನ್ನೂ ಅಲ್ಲೇ ಹತ್ತಿರದ ಮತ್ತೊಬ್ಬ ವಿದ್ಯಾರ್ಥಿನಿಯ ಮೇಲೆ ನಡೆದ ಪ್ರಕರಣದಲ್ಲಿ  ಶಿಕ್ಷೆಯಾಗಿದೆಯೇ,ಉಜಿರೆಯ ವಿದ್ಯಾರ್ಥಿನಿಯ ಕತೆ ಏನಾಯಿತು.  .?, ಕೊಣಾಜೆಯಲ್ಲಿ  ನಡೆದ ಪ್ರಕರಣದಲ್ಲಿ  ಏನಾಗಿದೆ. . ?,ಮಂಗಳೂರಿನಲ್ಲಿ  ಗಾಂಜಾ ಮಾರಾಟ ಪ್ರಕರಣ ಏನಾಯಿತು ?,ಕುಂದಾಪುರದಲ್ಲಿ  ಬಾಲಕಿ ಕೊಲೆ ಪ್ರಕರಣದ ಮುಂದಿನ ಬೆಳವಣಿಗೆ ಏನು ?,  ವಿದ್ಯಾರ್ಥಿನಿಯರ ವಿಡಿಯೋ ಹರಿದಾಡಿದ ಕೇಸ್‍ಗಳು ಏನಾದವು . .?, ಮೊನ್ನೆ ಮೊನ್ನೆ ಹೇಳುವ ಪುತ್ತೂರಿನ ವಿದ್ಯಾರ್ಥಿನಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ  ಆರೋಪಿ ಬಾಲಾಪರಾಧಿ ಎಂದು ಹೇಳಿಲ್ಲವೇ .  .?.. .  . . . . ಹೀಗೇ ಒಂದೆರಡಲ್ಲ ಹಲವಾರು ಪ್ರರಕಣಗಳು ನಮ್ಮಲ್ಲಿದೆ. ಯಾವುದರಲ್ಲೂ ಸರಿಯಾದ ನ್ಯಾಯ ಸಿಕ್ಕಿಲ್ಲ.ಒಂದು ವೇಳೆ ಈ ಎಲ್ಲಾ ಪ್ರಕರಣಗಳಿಗೆ ನ್ಯಾಯ ಸಿಗುತ್ತಿದ್ದರೆ. ಈ ಹುಡುಗರು  ಹಲ್ಲೆ ಮಾಡುತ್ತಿದ್ದರೇ. .?, ಯೋಚಿಸಬೇಕು.
ನ್ಯಾಯ ಸಿಗದೇ ಇರುವ ಕಾರಣದಿಂದಲೇ ಇಂದು ಪೊಲೀಸ್ ಇಲಾಖೆ ಹೋಗುವ ಮೊದಲೇ ಹಲ್ಲೆ ನಡೆಯುತ್ತದೆ. ಇದನ್ನೇ ನೈತಿಕ ಪೊಲೀಸ್‍ಗಿರಿ ಎನ್ನುತ್ತೇವೆ.ಈಗ ಒಬ್ಬ ಹುಡುಗ ಇನ್ನೊಂದು ಹುಡುಗಿಯ ಜೊತೆ ಮಾತನಾಡಲಾಗದ ಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ. ಜೊತೆಯಲ್ಲಿ ಹೋದರೇ ಪೆಟ್ಟು ತಿನ್ನುವ ಸಂದರ್ಭ ಒದಗಿದೆ.ಇದಕ್ಕೆ ಹೊಣೆ ಯಾರು ?, ಹೊಣೆಗಾರರನ್ನಾಗಿಸುವುದು  ಯಾರನ್ನು.  .?.
ಮೊನ್ನೆ ಪುತ್ತೂರಿನ ತಾಲೂಕು ಪಂಚಾಯತ್ ಸಭೆಯಲ್ಲಿ  ಜನಪ್ರತಿನಿಧಿಗಳು ಮಾತನಾಡಿದರು, ಯಾವುದೇ ಪ್ರರಕಣದಲ್ಲಿ  ಅನ್ಯಾಯವಾದರೆ, ನಾವು ನ್ಯಾಯದ ಪರ ನಿಲ್ಲುತ್ತೇವೆ, ಪೊಲೀಸರಿಗೆ ಒತ್ತಡ ತಾರದೆ ಸ್ವತಂತ್ರವಾಗಿ ಅವರು ತನಿಖೆ ಮಾಡುವಂತೆ ಸೂಚನೆ ನೀಡವ ಬಗ್ಗೆ ಮಾತನಾಡಿದರು.ನಿರ್ಣಯ ಮಾಡೋಣ ಎಂದೂ ಹೇಳಿದರು.ಇಂತಹ ಬೆಳವಣಿಗೆ ದೈನಂದಿನ ಜೀವನದಲ್ಲೂ ನಡೆಯಬೇಕು, ಸಭೆಗೆ ಮಾತ್ರವೇ ಸೀಮಿತವಾಗಬಾರದು, ಆಗ ನೈತಿಕ ಪೊಲೀಸ್‍ಗಿರಿ ಸಹಜವಾಗಿಯೇ ಕಡಿವಾಣ ಬೀಳುತ್ತದೆ.ನಿಜವಾದ ಆರೋಪಿಗೆ ಶಿಕ್ಷೆಯಾಗುತ್ತದೆ. ಕಾನೂನು ಸರಿಯಾಗಿ ಪಾಲನೆಯಾಗುತ್ತದೆ. ಸಮಾಜವೂ ನೆಮ್ಮದಿಯಾಗುತ್ತದೆ.

23 ಆಗಸ್ಟ್ 2015

ಅಡಿಕೆ ತೋಟಕ್ಕೆ ಔಷಧಿ ಸಿಂಪಡಣೆಗೆ ಕಾರ್ಮಿಕರ ತಂಡ. .

                                         ಔಷಧಿ ಸಿಂಪಡಣೆಗೆ ಕಾರ್ಮಿಕರ ತಂಡ



ಅಡಿಕೆ ಬೆಳೆಗಾರರು  ಕಳೆದ ಹಲವಾರು ಸಮಯಗಳಿಂದ ಸಂಕಟ ಪಡುವುದು  ಕೊಳೆರೋಗಕ್ಕೆ. ಮಳೆಗಾಲ ಶುರುವಾಯಿತು ಅಂದಾಗ ಭಯ ಶುರುವಾಗುತ್ತದೆ.ಕಾರಣ ಇಷ್ಟೇ, ಕೊಳೆರೋಗ ಬಾರದಂತೆ ಔಷಧಿ ಸಿಂಪಡಣೆಯಾಗಬೇಕು, ಆದರೆ ಇದಕ್ಕೆ ಕಾರ್ಮಿಕರ ಕೊರತೆ ಇದೆ.ಇನ್ನು ಕಾರ್ಮಿಕರು ಇದ್ದರೂ ವಿಪರೀತ ಸುಲಿಗೆ, ಕೃಷಿಕರನ್ನೇ ಶೋಷಣೆ. ಇದಕ್ಕೆಲ್ಲಾ ಪರಿಹಾರ ಬೇಕು ಅಂತಲೇ ಯೋಚನೆ ಇತ್ತು.
ಪರಿಸ್ಥಿತಿ ಹೀಗಿರುವಾಗ ನಮ್ಮ ವಾಟ್ಸ್‌ಪ್ ಗ್ರೂಪ್‌ಗೆ ಮಿತ್ರ ಚಿನ್ಮಯ ಒಂದು ಲೈನ್ ಮೆಸೇಜ್ ಪೋಸ್ಟ್ ಮಾಡಿದರು, ಔಷಧಿ ಸಿಂಪಡಣೆಗೆ ಕಾರ್ಮಿಕರ ತಂಡ ಇದೆ ಎಂದು. ಈ ಜಾಡು ಹಿಡಿದು ಪುತ್ತೂರು ತಾಲೂಕಿನ ಪೆರ್ನೆಯ ಕಡೆಗೆ ಹೋದಾಗ ಎಲ್ಲಾ ಸಂಗತಿಯನ್ನು  ಕಾರ್ಮಿಕ ಮುಖಂಡ ಯಶೋಧರ ಬಿಚ್ಚಿಟ್ಟರು. ಆ ಬಳಿಕ ನನಗಂತೂ ದೂರವಾಣಿ ಕರೆಗಳ ಮೇಕೆ ಕರೆಗಳು. ಆಗಲೇ ನನಗೆ ಅನ್ನಿಸಿದ್ದು  ಔಷಧಿ ಸಿಂಪಡಣೆಗೆ ಕಾರ್ಮಿಕರು ಇಷ್ಟೊಂದು ರೀತಿಯಲ್ಲಿ  ಶೋಷಣೆ ಮಾಡುತ್ತಾರಾ ?, ಹೀಗೆಲ್ಲಾ ಹೇಳಲಾಗದ ಸಮಸ್ಯೆಗಳು ಇದೆಯಾ ?.

ಹೀಗಿದೆ ಆ ತಂಡದ ಪರಿಚಯ. .  ..

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪೆರ್ನೆಯ ಯುವಕ ತಂಡ ಗುಂಪಿನ ಮೂಲಕ ಈಗ ಔಷಧಿ ಸಿಂಪಡಣೆಯ ಕೆಲಸ ಮಾಡುತ್ತಿದೆ.ಈ ತಂಡದ ನಾಯಕ ಯಶೋಧರ ನಾಯ್ಕ್.ಇವರು ಕಳೆದ 15 ವರ್ಷಗಳಿಂದ ತೋಟಗಳಿಗೆ ಔಷಧಿ ಸಿಂಪಡಣೆಯ ಕೆಲಸ ಮಾಡುತ್ತಿದ್ದಾರೆ.ಇವರ ಜೊತೆ ಕಳೆದ ಮಾಧವ ನಾಯ್ಕ್ ಕೂಡಾ ಸಾತ್  ನೀಡುತ್ತಿದ್ದರು.ಇದೀಗ 5 ವರ್ಷಗಳಿಂದ 8 ಜನರ ಯುವಕರ ತಂಡ ಕಟ್ಟಿ ಔಷಧಿ ಸಿಂಪಡಣೆಯ ಕೆಲಸ ಮಾಡುತ್ತಿದ್ದಾರೆ.ಈಗ ತಂಡದಲ್ಲಿ  ದೇವಪ್ಪ  ನಾಯ್ಕ್, ಗಂಗಾಧರ ನಾಯ್ಕ್,ರಾಜೇಶ್ ನಾಯ್ಕ್,ವಿಜಯ ನಾಯ್ಕ್,ಪದ್ಮನಾಭ ಪೂಜಾರಿ ಹಾಗೂ ಮಹೇಶ್ ಶೆಟ್ಟಿ ಇದ್ದಾರೆ. ಈಗಾಗಲೇ ಪೆರ್ನೆ, ಸರಪಾಡಿ, ನೆಲ್ಯಾಡಿ,ಮಂಜೇಶ್ವರ ಸೇರಿದಂತೆ 35 ರಿಂದ 40 ತೋಟಗಳಲ್ಲಿ  ಔಷಧಿ ಸಿಂಪಡಣೆ ಹಾಗೂ ಅಡಿಕೆ ಕಟಾವು ಮಾಡುವ ಹೊಣೆಯನ್ನು  ಹೊತ್ತಿದ್ದಾರೆ. ಶನಿವಾರ ಉಪ್ಪಿನಂಗಡಿ ಬಳಿಯ ಪೆರ್ನೆ ಬಿಳಿಯೂರು ಕಟ್ಟೆಯ ಧನ್ಯಕುಮಾರ್ ಅವರ ತೋಟದಲ್ಲಿ  ಔಷಧಿ ಸಿಂಪಡಿಸುವ ಕಾರ್ಯ  ನಡೆಯುತ್ತಿದ್ದರು.
ಅಡಿಕೆ ತೋಟಕ್ಕೆ ಔಷಧಿ ಸಿಂಪಡಣೆಯ ವೇಳೆ, ಮೋಟಾರು ಸಹಿತ 8 ಜನ ಮನೆಗೆ ಆಗಮಿಸುತ್ತಾರೆ, ಮನೆ ಮಂದಿ ಔಷಧಿ ತಯಾರಿಸಿ  ನೀಡಿದರೆ ಮುಗಿಯಿತು. ಇವರ ಜೊತೆ ಔಷಧಿ ತಯಾರಿಗೆ ಜನ ಬೇಕಾದರೆ ಕೂಡಾ ಇವರೇ ಕರೆದುಕೊಂಡು ಬರುತ್ತಾರೆ. 8 ಜನರಿಗೆ ಕನಿಷ್ಟ 3 ಜನ ಸಹಾಯಕರ ಅಗತ್ಯವಿದೆ ಎನ್ನುವ ಯಶೋಧರ , ಈ ಹೊಣೆಯನ್ನೂ ನಾವು ಹೊತ್ತುಕೊಳ್ಳುತ್ತೇವೆ ಎಂದು  ಹೇಳುತ್ತಾರೆ.ಇಷ್ಟೂ ಜನ ಒಂದು ದಿನದಲ್ಲಿ  6 ರಿಂದ 7 ಸಾವಿರ ಅಡಿಕೆ ಮರಗಳಿಗೆ ಔಷಧಿ ಸಿಂಪಡಿಸುತ್ತಾರೆ.ಮೋಟಾರು ಸಹಿತ ಮನೆಗೆ ಮನೆ ಆಗಮಿಸಿ ಔಷಧಿ ಸಿಂಪಡಣೆಯ ಕಾರ್ಯದಲ್ಲಿ  ನಿರತವಾಗುತ್ತದೆ.ಮನೆ ಮಂದಿ ಔಷಧಿ ತಯಾರಿಸಿ  ನೀಡಿದರೆ ಮುಗಿಯಿತು. ಅಡಿಕೆ ಕಟಾವು ವೇಳೆ ಕೂಡಾ ಜನವನ್ನೂ ವ್ಯವಸ್ಥೆ ಮಾಡಿ ಮನೆಗೆ ಬಂದು ಕೆಲಸ ಮಾಡಿ ತೆರಳುತ್ತಾರೆ.ಇಡೀ ವರ್ಷ ಈ ತಂಡ ಇದೇ ಕೆಲಸ ಮಾಡುತ್ತದೆ.ಮೋಟಾರಿಗೆ ಬಾಡಿಗೆ 2 ಸಾವಿರ ರೂಪಾಯಿ ಪಡೆಯುವ ಈ ತಂಡ ತಮ್ಮ ಕೆಲಸ ಕಾರ್ಯಗಳಿಗೆ ದಿನ ಲೆಕ್ಕದಲ್ಲಿ  ಸಂಬಳವನ್ನು  ಪಡೆಯುತ್ತಾರೆ.ಇವರು  ದಿನಕ್ಕೆ 1200 ರೂಪಾಯಿ ಸಂಬಳ ಪಡೆಯುತ್ತಾರೆ.



ಬದಲಾವಣೆ ಬೇಕು.  .
ಈಗ ಇಲ್ಲಿ  ರಚನೆಯಾದ ತಂಡ ಬಹುಶ: ಶಾಶ್ವತವಾಗಬಹುದು.ಏಕೆಂದರೆ ತಂಡದ ಸದಸ್ಯರು ಬಹುತೇಕ ಮಂದಿ ಸಂಬಂಧಿಕರು.ಒಂದೆರಡು ಮಂದಿ ಮಾತ್ರವೇ ಇತರರು. ಹೀಗಾಗಿ ತಂಡ ಒಡೆಯುವ ಸಾಧ್ಯತೆ ಕಡಿಮೆ.ಒಡೆದರೂ ಮತ್ತೊಂದು ಅಂತಹದ್ದೇ ತಂಡ ರಚನೆಯಾಗಬಹುದು.ಇದು ಕೂಡಾ ಕೃಷಿಕರಿಗೆ ಪ್ರಯೋಜನ. ಇದರ ಜೊತೆಗೇ ಸಹಕಾರಿ ಸಂಘಗಳು ಇಂತಹ ತಂಡ ರಚನೆ ಮಾಡುವ ಬಗ್ಗೆ ಯೋಚಿಸಿದರೆ ಹೆಚ್ಚು ಗಟ್ಟಿಯಾಗಬಹುದು. ಏಕೆಂದರೆ ಆಗ ಸಹಕಾರಿ ಸಂಘಕ್ಕೆ ಬದ್ದತೆ ಇರುತ್ತದೆ. ಕೃಷಿಕರಿಗೂ ಹಾಗೆಯೇ. ಇನ್ನು  ಸಂಬಳದ ಬಗ್ಗೆ ಕೃಷಿಕರು  ಹೆಚ್ಚು ತಲೆಕೆಡಿಸಿಕೊಳ್ಳಬೇಕಾಗಿಲ್ಲ, ಏಕೆಂದರೆ ಒಂದೇ ದಿನದಲ್ಲಿ  ತೋಟದ ಔಷಧಿ ಸಿಂಪಡಣೆ ಕೆಲಸ ಮುಗಿಯುತ್ತದೆ, ಎಷ್ಟೇ ಮಳೆ ಇದ್ದರೂ ದಿನದಲ್ಲಿ  ಒಂದೆರಡು ಗಂಟೆ ಮಳೆಗೆ ವಿರಾಮ ಇದ್ದೇ ಇರುತ್ತದೆ.ಆಗ ಬಹುಪಾಲು ಸಿಂಪಡಣೆಯೂ ಆಗುತ್ತದೆ.
ಹೊಸ ಪ್ರಕ್ರಿಯೆಗಳು ಆರಂಭವಾದಾಗ ಕೆಲವೊಂದು ಲೋಪಗಳೂ ಇರುತ್ತದೆ. ಆದರೆ ಕೃಷಿಕರು ಎಲ್ಲವೂ ನಾವು ಅಂದುಕೊಂಡತೇ ಈಗ ಆಗಬೇಕು ಎಂದರೂ ಆಗದು.ಹೀಗಾಗಿ ಬದಲಾವಣೆ ಬೇಕು, ಅದನ್ನು  ಒಪ್ಪಿಕೊಳ್ಳಬೇಕು, ತೀರಾ ನಷ್ಟವಾಗುವುದಾದರೆ ಮಾತ್ರವೇ ಯೋಚಿಸಬೇಕು. ಹೀಗಾದಾಗ ಕೃಷಿ ಉಳಿಯಲು, ಬೆಳೆಯಲು ಸಾಧ್ಯವಿದೆ.
.



ಮನಸ್ಸೇ ಬೀಗ ತೆಗೆ. . .


ಅನೇಕ ದಿನಗಳಿಂದ ಈ ಕಡೆಗೆ ಬರಲು ಸಾದ್ಯವೇ ಆಗಿರಲಿಲ್ಲ.ಮನಸ್ಸು ಸದಾ ಇತ್ತ ಹೊರಳುತ್ತಲೇ ಇತ್ತು.ಆದರೆ ಸಾಧ್ಯವಾಗುತ್ತಿರಲಿಲ್ಲ, ಅದಕ್ಕೊಂದು ಬೀಗ ಇತ್ತು.ಈಗಂತೂ ಆ ಬೀಗ ಕಳಚಿ ಬಂದಿದ್ದೇನೆ. .

ಅಂದು ಒಂದು ದಿನ ನಾನು ಮನಸ್ಸಿನ ಸಂಗತಿಗಳನ್ನು  ಮೌನವಾಗಿ ಹೇಳುತ್ತಿದೆ, ಇದೆಲ್ಲವೂ ಇಲ್ಲಿ ದಾಖಲಿಸುತ್ತಲೇ ಇದ್ದೆ.ಅನೇಕ ರೀತಿಯಿಂದ ಸ್ಪೂರ್ತಿ, ಪ್ರೋತ್ಸಾಹ ಇತ್ತು. ಒಂದು ದಿನ ಇದ್ದಕ್ಕಿದ್ದಂತೆ ನನಗೆ ಒತ್ತಡ ಬಂದಿತ್ತು, ಹಿತವಚನ, ಸಲಹೆ ಬಂತು. ಕೊನೆಗೆ ಈ ವೇಗಕ್ಕೆ ಕಡಿವಾಣ ಹಾಕಿದೆ.ಮನಸ್ಸಿನ ಮಾತಿಗೆ ಬೀಗ ಜಡಿದೆ. ಆದರೆ ನನಗೆ ಈಗಲೂ ನೆನಪಿದೆ, ಅಂದು ನನ್ನ ಮನಸ್ಸಿನ ಮೂಲಕ ಬಂದ ಮೌನದ ಮಾತುಗಳು ಇಂದು ದೊಡ್ಡ ಸುದ್ದಿಯಾಗಿದೆ. ಚರ್ಚೆಯಾಗುತ್ತಲೇ ಇದೆ. ಇರಲಿ ನನಗೆ ಅದು ಸಂಬಂಧಪಟ್ಟದ್ದಲ್ಲ. ನನಗೆ ಯಾರ ಬಳಿಯೂ ಬೇಸರವಿಲ್ಲ, ನೋವುಗಳೂ ಇಲ್ಲ. ಯಾರ ವಿರೋಧಿಯಂತೂ ಅಲ್ಲವೇ ಅಲ್ಲ. ಎಲ್ಲರೂ ನನ್ನವರೇ, ನಮ್ಮವರೇ. ಅಂದು ಮನಸ್ಸು ಕೊಂಚ ಮೌನವಾಗಿತ್ತು, ಮೌನಿಯಾಗಿತ್ತು. ಆದರೆ ಈಗ ಹಾಗಿಲ್ಲ. ಎಲ್ಲವೂ ರೈಟ್, ಎಲ್ಲದಕ್ಕೂ ರೈಟ್. ಹಾಗಿದ್ದರೂ ಈ ಬೀಗ ತೆರವು ಮಾಡಲು ಆಗಿರಲಿಲ್ಲ. ಈಗ ತೆರೆದಿದ್ದೇನೆ.
ಇಂದಿನಿಂದಲೇ ಇಲ್ಲಿ  ಶುರು.  ..