07 ಸೆಪ್ಟೆಂಬರ್ 2015

ಮೆಸೇಜ್ ಮಾತಿಗೆ ಜಗಳ ಏಕೆ. .?


                                                                ( Net Photo )
ಅವರಿಬ್ಬರೊಳಗೆ ಮಾತುಕತೆಯೇ ನಿಂತು ವಾರಗಳೇ ಕಳೆದುಹೋಗಿತ್ತು, ಕಾರಣ ಕೇಳಿದರೇ ಇಬ್ಬರದೂ ಉತ್ತರ ಇಲ್ಲ.  .!. ಬಳಿಕ ತಿಳಿಯಿತು, ಅದೊಂದು ಮೆಸೇಜ್‍ನಿಂದ ಮನಸ್ಸು ಒಡೆಯಿತು. . !. ಆದರೆ ಇಬ್ಬರೂ ನಂತರ ಹೇಳುತ್ತಾರೆ. ನಾನು ಹೇಳಿದ್ದು ಒಂದು ಆತ ಅರ್ಥೈಸಿದ್ದು ಇನ್ನೊಂದು. . !. ವಿಷಯ ತಿಳಿಯಾದಾಗ ಇಬ್ಬರೂ ಮತ್ತೆ ಒಂದಾದರು.
ಅಲ್ಲಿ  ಇಬ್ಬರೂ ಚರ್ಚೆ ಮಾಡುತ್ತಿದ್ದರು, ಆ ಘಟನೆಗೆ ಹೇಗೆ ಸಹಾಯ ಮಾಡುವುದು? , ಇದು ಕೂಡಾ ಒಂದು ಮೆಸೇಜ್ ಬಗ್ಗೆ ನಡದ ಚರ್ಚೆ. ಒಂದು ಗಲಾಟೆಗೆ ಕಾರಣವಾದರೆ ಮತ್ತೊಂದು ಒಂದಾಗಿ ಸಾಗುವ ಬಗ್ಗೆ ಮಾತುಕತೆ.
ಇಂದು ಹೆಚ್ಚಿನ ಸಂದರ್ಭ ನಡೆಯುವುದೇ ಇದೇ. ಒಳ್ಳೆಯ ಉದ್ದೇಶದಿಂದ ಒಂದು ಮೆಸೇಜ್ ಕಳುಹಿಸಿದರೆ ಅದು ಮತ್ತೊಂದು ರೂಪ ಪಡೆದುಕೊಳ್ಳುತ್ತದೆ. ಆಗ ಮನಸ್ಸುಗಳು ಒಡೆಯುತ್ತದೆ. ಈಗಂತೂ ವಾಟ್ಸಪ್‍ನಲ್ಲಿ ಮೆಸೇಜ್ ಫಾರ್ವರ್ಡ್ ಕೂಡಾ ಮಾಡುತ್ತೇವೆ, ಅದು ಇನ್ನೊಂದು ಅವಾಂತರವನ್ನೇ ಸೃಷ್ಟಿಸುತ್ತದೆ. ಮೊನ್ನೆ ನನ್ನ ಮಿತ್ರ ಹೇಳುತ್ತಿದ್ದ , ಅದ್ಯಾವುದೋ ಮೆಸೇಜ್ ಫಾರ್ವರ್ಡ್ ಮಾಡಿದ್ದನಂತೆ, ಅದೇ ವಿಷಯದಿಂದ ಎರಡು ಮನೆಯವರು  ಹೊಡೆದಾಟ ಮಾಡುವ ಸ್ಥಿತಿಗೆ ಬಂದಿದ್ದರಂತೆ. ವಾಸ್ತವವಾಗಿ ಈ ಮೆಸೇಜ್ ಏನು ಎಂದು  ಓದದೇ ಫಾರ್ವರ್ಡ್ ಮಾಡಿದ್ದ. .!, ಅದೇ ದೊಡ್ಡ ಗಲಾಟೆಗೂ ಕಾರಣವಾಯಿತು. ಆದರೆ ಆ ಬಳಿಕ ನೋಡಿಲ್ಲ ಎನ್ನುವುದು ಉತ್ತರವಾಗುವುದಿಲ್ಲ, ಉದ್ದೇಶಪೂರ್ವಕವಾಗಿಯೇ ಎಂಬುದು  ಗಟ್ಟಿಯಾಗುತ್ತದೆ.ಹೀಗಾಗಿ ಈಗ ಮೆಸೇಜ್ ಮಾಡುವಾಗಲೂ ಎಚ್ಚರಿಕೆ ಬೇಕು.ಕೆಲವೊಮ್ಮೆ ನಮ್ಮ ನಿಲುವಿಗೂ, ಆ ಮೆಸೇಜ್‍ಗೂ ಯಾವುದೇ ಸಂಬಂಧ ಇರುವುದೇ ಇಲ್ಲ, ಹಾಗಿದ್ದರೂ ಮೆಸೇಜ್ ಫಾರ್ವರ್ಡ್ ಮಾಡುತ್ತೇವೆ, ಅದೊಂದು ಖುಷಿ ಅಷ್ಟೇ.
ಮೊನ್ನೆ ಹೀಗೆಯೇ ಆಯಿತು, ಅದ್ಯಾವುದೋ ವಾಟ್ಸಪ್ ಗುಂಪಿನಲ್ಲಿ  ಚರ್ಚೆ ನಡೆಯುತ್ತಿತ್ತು, ಅದನ್ನು  ಮತ್ತೊಬ್ಬ ಫೋಟೊ ತೆಗೆದು ಇನ್ನೂ ಹಲವರಿಗೆ ಕಳುಹಿಸಿದ, ತಮಾಷೆಗಾಗಿ ಗುಂಪಿನಲ್ಲಿ  ಮಾಡಿದ ಚರ್ಚೆ ಗಂಭೀರ ಸ್ವರೂಪ ಪಡೆಯಿತು. ಮಿತ್ರರೊಳಗೇ ಅಪನಂಬಿಕೆ ಶುರುವಾಯಿತು.ಹೀಗಾಗಿ ಗುಂಪು ಚರ್ಚೆ ಕೂಡ ಕಷ್ಟ, ಇನ್ನೊಂದು ಕಡೆ ಗುಂಪು ಚರ್ಚೆ ನಡೆಯುವ ವೇಳೆ ಒಬ್ಬನಿಗೆ ಕಿರಿಕಿರಿಯಾಯಿತು, ಆತ ಎಲ್ಲರಿಗೂ ಕಿರಿಕಿರಿ ನೀಡಿದ, ಬೇಕಾದು ಬೇಡದ್ದು ಎಲ್ಲವನ್ನೂ ಗುಂಪಿಗೆ ಹಾಕಿದ ಅಲ್ಲೂ ಒಡಕು ಶುರುವಾಯಿತು.. .!.
ಹೀಗೇ.  . ಈಗ ಸಮಾಜದ ಎಲ್ಲೇ ಹೋಗಲಿ ಬಿರುಕುಗಳು. ಒಬ್ಬನ ತಪ್ಪುಗಳು ಬೇಡವೆನಿಸಿದರೂ ಬೇಗ ಸಿಕ್ಕಿಬಿಡುತ್ತದೆ, ಅದಕ್ಕೆ ತೀರ್ಮಾನ ಕೂಡಾ ಆಗಿ ಬಿಡುತ್ತದೆ.ಆದರೆ ವಾಸ್ತವದಲ್ಲಿ  ಆತನ ಉದ್ದೇಶವೇ ಬೇರೆಯದೇ ಇರುತ್ತದೆ, ಮಿತ್ರನೇ ಆಗಿರುತ್ತಾನೆ, ಆದರೆ ವೇಗದ ತಂತ್ರಜ್ಞಾನ ಆತನದೇ ತಪ್ಪು  ಅಂತ ಅಂತ ಹೇಳುತ್ತದೆ, ಮನಸ್ಸು ಒಪ್ಪಿಕೊಳ್ಳುತ್ತದೆ. ವಿಶ್ಲೇಷಿಸುವ ಹಾಗೂ ಮತ್ತೆ ಪರಾಮರ್ಶಿಸುವ ಬಗ್ಗೆ ಯೋಚಿಸುವುದಿಲ್ಲ ಈಗ ಮನಸ್ಸು. . .!

ಕಾಮೆಂಟ್‌ಗಳಿಲ್ಲ: